ಮಹಾರಾಷ್ಟ್ರ : ಹಾಡಹಗಲೇ 19 ವರ್ಷದ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಪ್ರವೀಣ್ ಕೌನ್ಪುರೆ ಕೊಲೆ ಮಾಡಿರುವ ಆರೋಪಿ. ಹಾಡಹಗಲೇ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ದರಿಯಾಪುರ ತಾಲೂಕಿನ ಲೇಹಾಗಾಂವ್ ಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ


0 Comments: